
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಯಲ್ಲಾಪುರ : ರಾಜ್ಯ ಸರ್ಕಾರದ ವೈಪಲ್ಯತೆ ಜನರಲ್ಲಿ ಮಡುಗಟ್ಟಿರುವ ಆಕ್ರೋಶ ಹೊರಹಾಕುವ ಸಲುವಾಗಿ ಉತ್ತರ ಕನ್ನಡ ಜಿಲ್ಲೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಜನಾಕ್ರೋಶ ಪಾದಯಾತ್ರೆ ಆಗಮಿಸುತ್ತಿದ್ದು ಜಿಲ್ಲೆಯ ಮಧ್ಯವರ್ತಿ ಸ್ಥಳವಾದ ಯಲ್ಲಾಪುರದಲ್ಲಿ ಏ,11 ರಂದು ನಡೆಯಲಿದ್ದು ಕಾಂಗ್ರೆಸ್ ಸರ್ಕಾರದ ದುರಾಡಳಿತ,ಸ್ವಜನ ಪಕ್ಷಪಾತ,ಓಟ್ ಬ್ಯಾಂಕ್ ರಾಜಕಾರಾಣ, ಎಸ್.ಸಿ/ಎಸ್.ಟಿ ಅಭಿವೃದ್ಧಿಗೆ ಮೀಸಲಿಟ್ಟ ನಿಧಿಯ ದುರುಪಯೋಗ, ಮುಸ್ಲಿಂ ಸಮುದಾಯಕ್ಕೆ ವಿಶೇಷವಾಗಿ ಮೀಸಲಿಟ್ಟ 4% ಮೀಸಲಾತಿಯ ವಿರುದ್ದ ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸಬೇಕಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್.ಹೆಗಡೆ ಹೇಳಿದರು.

ಅವರು ಪಟ್ಟಣದ ಟಿ.ಎಂ.ಎಸ್ ಸಭಾ ಭವನದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ಏ,11 ರಂದು ಬೆಳಗ್ಗೆ 10 ಗಂಟೆಗೆ ಶಕ್ತಿ ದೇವತೆಯರಾದ ಗ್ರಾಮದೇವಿಯರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪುತ್ರ ಬಿವೈ.ವಿಜಯೇಂದ್ರ ನೇತೃತ್ವದಲ್ಲಿ ಪೂಜೆ ಸಲ್ಲಿಸಿ “ಜನಾಕ್ರೋಶ ಬೃಹತ್ ಪಾದಯಾತ್ರೆ” ಸಾಗಲಿದೆ. ಯಾತ್ರೆಯು ಪೊಲೀಸ್ ಚೌಕ್ ನಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಹಾದು ಬೆಲ್ ರಸ್ತೆ ಮೂಲಕ ಅಂಬೇಡ್ಕರ್ ವೃತ್ತದಲ್ಲಿ ಸಾಗಿ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆ ಆವಾರದಲ್ಲಿ ಸಮಾವೇಶಗೊಂಡು ಸಭಾ ಕಾರ್ಯಕ್ರಮ ಜರುಗಲಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್ ಕೋಣೆಮನೆ, ಪ್ರಧಾನಕಾರ್ಯದರ್ಶಿ ಗುರುಪ್ರಸಾದ್, ಯಲ್ಲಾಪುರ ಮಂಡಲಾಧ್ಯಕ್ಷ ಪ್ರಸಾದ ಹೆಗಡೆ, ಮಾಜಿ ಅಧ್ಯಕ್ಷ ಗೋಪಾಲಕೃಷ್ಣ ಎನ್ ಗಾಂವ್ಕರ್, ಜಿಲ್ಲಾ ಪ್ರಮುಖರಾದ ಉಮೇಶ್ ಭಾಗ್ವತ್, ಪ್ರಶಾಂತ ನಾಯ್ಕ್, ಶಿವಾಜಿ ನರಸಾನಿ, ಪ್ರಮುಖರಾದ ಚಂದ್ರಕಲಾ ಭಟ್, ರಜನಿ ಚಂದ್ರಶೇಖರ್, ಕೆ.ಟಿ.ಹೆಗಡೆ, ಎನ್.ಕೆ.ಭಟ್ ಅಗ್ಗಾಶಿಕುಂಬ್ರಿ, ಗಣಪತಿ ಮಾನಿಗದ್ದೆ, ರವಿಕೈಟ್ಕರ್, ನಟರಾಜ ಗೌಡರ್, ಸೋಮೇಶ್ವರ ನಾಯ್ಕ್, ರಜತ್ ಬದ್ದಿ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.
Prathidvani Yellapura