Breaking News

ಗ್ರಾಹಕ ಸ್ನೇಹಿ ಗ್ರಾಮದೇವಿ ಕನ್ಸ್ಟ್ರಕ್ಷನ್ಸ್ ನೂತನ ಕಚೇರಿ ಉದ್ಘಾಟಿಸಿದ ಶಾಸಕ ಶಿವರಾಮ ಹೆಬ್ಬಾರ್.

ವಾಣಿಜ್ಯ ಉದ್ದೇಶದ ಸುದ್ದಿ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಯಲ್ಲಾಪುರ : ಪಟ್ಟಣದ ಕೆ.ಬಿ.ರಸ್ತೆಯಲ್ಲಿ ಸಂಕಲ್ಪ ಹೊಟೆಲ್ ಮುಂಭಾಗದ ಎಲ್.ಎಸ್.ಎಂ.ಪಿ ವಾಣಿಜ್ಯ ಸಂಕೀರ್ಣದಲ್ಲಿ ರವಿವಾರ ಗ್ರಾಹಕ ಸ್ನೇಹಿ ಸಂಸ್ಥೆ ಎಂದೇ ಹೆಸರಾದ ವಿಶಾಲ್ ವಾಳಂಬಿ ಒಡೆತನದ ಶ್ರೀ ಗ್ರಾಮದೇವಿ ಕನ್ಸ್ಡ್ರಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ನ ನೂತನ ಕಚೇರಿಯನ್ನು ಯಲ್ಲಾಪುರ-ಮುಂಡಗೋಡು ಶಾಸಕ ಶಿವರಾಮ ಹೆಬ್ಬಾರ್ ಉದ್ಘಾಟಿಸಿದರು.


     2016 ರಲ್ಲಿ ಪ್ರಾರಂಭಿಸಿದ ಸಂಸ್ಥೆ ಸಂತೃಪ್ತ ಗ್ರಾಹಕರ ಆಶಿರ್ವಾದದಿಂದ ವಿಶಾಲ್ ವಾಳಂಬಿಯ ಪರಿಶ್ರಮದ ಫಲವಾಗಿ ಯಲ್ಲಾಪುರ ತಾಲೂಕಿನ ಗೃಹ ನಿರ್ಮಾಣ ವಲಯದಲ್ಲಿ ಉತ್ತಮ ಹೆಸರು ಗಳಿಸಿ ಗ್ರಾಹಕ ಸ್ನೇಹಿ ನಿರ್ಮಾಣ ಸಂಸ್ಥೆ ಎಂಬ ಹೆಸರು ಪಡೆದು ಜನಪ್ರಿಯತೆ ಗಳಿಸಿದೆ.

  ವಿಶಾಲ್ ವಾಳಂಬಿ ಒಡೆತನದ ಸಂಸ್ಥೆ ಈಗಾಗಲೆ ಹಲವು ಮನೆಗಳನ್ನು ನಿರ್ಮಾಣ ಮಾಡಲಾಗಿದ್ದು ಉತ್ತಮ ಯೋಜನೆ,ಅಂದಾಜು ವೆಚ್ಚ, ಗುಣಮಟ್ಟದ ಮೌಲ್ಯ ಗಳನ್ನು ಅಳವಡಿಸಿಕೊಂಡು ಜನಾಕರ್ಷಣೆಗೆ ಕಾರಣವಾಗಿದೆ.


    ಇದೀಗ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಶಿವರಾಮ ಹೆಬ್ಬಾರ್ ನೂತನ ಕಚೇರಿ ಉದ್ಘಾಟಿಸಿ ಶುಭಹಾರೈಸಿದರು.ಶಾಸಕರಿಗೆ ವಿಶಾಲ್ ವಾಳಂಬಿ ಕುಟುಂಬದ ವತಿಯಿಂದ ಗೌರವ ಸಮರ್ಪಿಸಿದರು.


   ಸಾಮಾಜಿಕ ಕಾರ್ಯಕರ್ತ ಜಿಲ್ಲಾ ಪಂಚಾಯತ ಮಾಜಿ ಸದಸ್ಯ ವಿಜಯ್ ಮಿರಾಶಿ, ಸರ್ಕಾರಿ ಭೂಮಿ ಉಳಿಸಿ ಹೋರಾಟ ಸಮಿತಿ ಜಿಲ್ಲಾ ಪ್ರಮುಖ ಎಂ.ಜಿ.ಭಟ್, ಪಟ್ಟಣ ಪಂಚಾಯತ ಉಪಾಧ್ಯಕ್ಷ ಅಮಿತ್ ಅಂಗಡಿ, ನಿರ್ಮಾಣ ಕ್ಷೇತ್ರದ ವಿವಿಧ ವಲಯದ ಪ್ರಮುಖರು ಇನ್ನಿತರ ಹಿರಿಯರು ಹಿತೈಷಿ ಬಂಧುಗಳು,ಸ್ನೇಹಿತರು ಉಪಸ್ಥಿತರಿದ್ದು ಶುಭಕೋರಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *