Breaking News

ಮೂಲಭೂತ ಸೌಕರ್ಯ ವಂಚಿತ  ಸಣ್ಣ ಪಾನಿಗುಂಡಿ ಗ್ರಾಮಕ್ಕೆ ಪಂಚಾಯತ್ ಅಭಿವೃದ್ದಿ ಅಧಿಕಾರಿ ಶಿವಕುಮಾರ್ ಭೇಟಿ ಪರಿಶೀಲನೆ.


ಪ್ರತಿಧ್ವನಿ ಯಲ್ಲಾಪುರ : ಕಳೆದ ಕೆಲವು ದಿನಗಳಿಂದ ಯಲ್ಲಾಪುರ ತಾಲೂಕಿನ ಕಿರವತ್ತಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಣ್ಣ ಪಾನಿಗುಂಡಿ ಗ್ರಾಮ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿರುವುದರ ಕುರಿತು ಪ್ರತಿಧ್ವನಿ ನಿರಂತರ ಸುದ್ದಿ ಪ್ರಕಟಿಸುತ್ತಿದ್ದು ಇದೀಗ ಪಂಚಾಯತ್ ಅಭಿವೃದ್ದಿ ಅಧಿಕಾರಿ ಶಿವಕುಮಾರ್ ವಿರಕ್ತಮಠ ಮಂಗಳವಾರ ಬೇಟಿ ನೀಡಿದ್ದು ಗ್ರಾಮಸ್ಥರಲ್ಲಿ ಚರ್ಚಿಸಿದರು.


ಈ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರ ವಿಟ್ಟು ದೋಂಡು ಪಟಕಾರೆ ಸ್ಥಳದಲಿದ್ದು ಗ್ರಾಮದ ಹಿರಿಯರೊಡಗೂಡಿ ಪಿ.ಡಿ.ಒ ಅವರಿಗೆ ನೈಜ ಪರಿಸ್ಥಿತಿ ವಿವರಿಸಿ ಪ್ರತ್ಯಕ್ಷವಾಗಿ ಕಾಣಿಸಿದರು. ಜೊತೆಯಲ್ಲಿ ದಲಿತ ಮುಖಂಡ ಸಾಮಾಜಿಕ ಕಾರ್ಯಕರ್ತ ಅರ್ಜುನ್ ಬೆಂಗೇರಿ ಸ್ಥಳದಲಿದ್ದರು.


ಅಧಿಕಾರಿ ಶಿವಕುಮಾರ್ ಸಕಾರಾತ್ಮಕವಾಗಿ ಸ್ಪಂದಿಸಿ ವಾಸ್ತವಿಕತೆಯ ವಿವರವನ್ನು ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಮತ್ತು ನೀರಿನ ವ್ಯವಸ್ಥೆ ಸದ್ಯಕ್ಕೆ ಇದ್ದು ಇಲ್ಲಿಯೆ ಒಂದು ಕೊಳವೆ ಬಾವಿ ಕೊರೆಸಬೇಕೆಂದು ಗ್ರಾಮಸ್ಥರು ಬೇಡಿಕೆ ಇಟ್ಟಿದ್ದಾರೆ. ಉಳಿದಂತೆ ಸರ್ಕಾರದಿಂದ ಯಾವುದೆ ಅನುದಾನ ಬಂದರು ಮೊದಲ ಆದ್ಯತೆಯಾಗಿ ಗ್ರಾಮದ ಸಮಸ್ಯೆಗಳ ಬಗೆಹರಿಸಲು ಆದ್ಯತೆ ನೀಡಲಾಗುವುದು ಎಂದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

“ಸೇವೆ ಎಂಬ ಯಜ್ಞದಲ್ಲಿ ಸಮಿತೆಯಂತೆ ಉರಿಯುವ” ಹಿಂದು ಮುಖಂಡ ಸೋಮೇಶ್ವರ ನಾಯ್ಕ್ ಗೆ ಒಪ್ಪುವಂತಹ ಸಾಲುಗಳು.

ಪ್ರತಿಧ್ವನಿ ಯಲ್ಲಾಪುರ : ಸೇವಾ ಭಾವದಲ್ಲಿ ಸಮಾಜಕ್ಕಾಗಿ ಶ್ರಮಿಸುವ ಮತ್ತು ಸಮಾಜದ ಒಳಿತಿಗಾಗಿ ಸದಾ ಮಿಡಿವ ಮನಸ್ಸುಗಳಲ್ಲಿ ಯಲ್ಲಾಪುರದ ಹಿಂದು …

Leave a Reply

Your email address will not be published. Required fields are marked *