Breaking News

Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

ಡಬಲ್ ಇಂಜಿನ್ ಸರ್ಕಾರದಿಂದ ಅಭಿವೃದ್ದಿಗೆ ವೇಗ ಹೆಚ್ಚು – ಶಿವರಾಮ ಹೆಬ್ಬಾರ್

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ರಾಜ್ಯ ಮತ್ತು ಕೇಂದ್ರದಲ್ಲಿ ಭಾರತೀಯ ಜನತಾ ಪಕ್ಷದ ಸರ್ಕಾರವಿರುವುದರಿಂದ ಡಬಲ್ ಇಂಜಿನ್ ಸರ್ಕಾರದಿಂದ ಅಭಿವೃದ್ಧಿ ಕಾರ್ಯಗಳ ವೇಗ ಹೆಚ್ಚಾಗುತ್ತದೆ. ಈ ಹಿನ್ನಲೆಯಲ್ಲಿ ಸಾಕಷ್ಟು ಜನಪರ ಯೋಜನೆಗಳು ಕ್ಷೇತ್ರದಲ್ಲಿ ಅನುಷ್ಠಾನಗೊಂಡಿರುವುದರಿದ ಜನರಲ್ಲಿ ಇನ್ನೂ ಹೆಚ್ಚಿನ ವಿಶ್ವಾಸ ಮೂಡಿದೆ. ಈ ಎಲ್ಲಾ ವಿಚಾರಧಾರೆಗಳನ್ನು ನಮ್ಮೊಳಗೇ ಮೆಲುಕು ಹಾಕುವುದಕ್ಕಿಂತ ಜನರ ಬಳಿಗೆ ಕೊಂಡೊಯ್ದು ಚುನಾವಣಾ ಅಭೂತಪೂರ್ವ ವಿಜಯ ಸಾಧಿಸುವಲ್ಲಿ ಕಾರ್ಯಕರ್ತರು ಶ್ರಮಿಸಬೇಕಿದೆ ಎಂದು …

Read More »

ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಸೇರ್ಪಡೆ ಪರ್ವ ಬಲು ಜೋರು

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಕಿರವತ್ತಿ ಗ್ರಾಮ ಪಂಚಾಯತ ವ್ಯಾಪ್ತಿ ಹಾಗೂ ಚಂದಗುಳಿ ಪಂಚಾಯತ ವ್ಯಾಪ್ತಿಯ 60 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ರಾಘವೇಂದ್ರ ಭಟ್ಟ ನೇತೃತ್ವದಲ್ಲಿ ವಿ.ಎಸ್.ಪಾಟೀಲ ಸಮ್ಮುಖದಲ್ಲಿ ಮುಂಡಗೋಡದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕಿರವತ್ತಿ ಗ್ರಾ.ಪಂ ವ್ಯಾಪ್ತಿಯ ಬೈಲಂದೂರು ಗ್ರಾಮದ 25 ಕ್ಕೂ ಅಧಿಕ , ಯಲವಳ್ಳಿ ಗ್ರಾಮದ 20 ಕ್ಕೂ ಹೆಚ್ಚು, …

Read More »

ಯಲ್ಲಾಪುರ ತಾಲೂಕಿನ ನಂದೊಳ್ಳಿಯಲ್ಲಿ ರಾಮಲಿಂಗೇಶ್ವರ ನಾಟಕ (ನಾಟ್ಯ) ಕಲಾ ಬಳಗದ ಆಶ್ರಯದಲ್ಲಿ ನಾಟಕ ಪ್ರದರ್ಶನ ಹಾಗೂ ಸನ್ಮಾನ ಕಾರ್ಯಕ್ರಮ

ಪ್ರತಿಧ್ವನಿ,ಯಲ್ಲಾಪುರ – ತಾಲೂಕಿನ ನಂದೊಳ್ಳಿ ಸ.ಹಿ.ಪ್ರಾ ಶಾಲೆಯ ಆವಾರದಲ್ಲಿ ರಾಮಲಿಂಗೇಶ್ವರ ನಾಟಕ (ನಾಟ್ಯ) ಕಲಾ ಬಳಗದ ಕಲಾವಿದರಿಂದ ” ಕುಡುಕ ಕಟ್ಟಿದ ತಾಳಿ ಅರ್ಥಾತ್‌ ಸಾಕು ತಂಗಿಯ ಸಂಕಟ “ ನಾಟಕ ಪ್ರದರ್ಶನ ಕಂಡಿತು. ಜ್ಯೋತಿಷಿ ಗೋಪಾಲಕೃಷ್ಣ ಭಟ್ಟ ಹಂಡ್ರಮನೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗ್ರಾ.ಪಂ ಅಧ್ಯಕ್ಷ ನರಸಿಂಹ ಕೋಣೆಮನೆ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವೈದಿಕ ನಾರಾಯಣ ಭಟ್ಟ ಮೊಟ್ಟೆಗದ್ದೆ, ನಾಟಕ ಕಲಾವಿದ ನರಸಿಂಹ ಭಾಗ್ವತ ಗುಂಡ್ಕಲ್, ನಿವೃತ್ತ ಶಿಕ್ಷಕ ಕೆ.ಜಿ.ನಾಯಕ …

Read More »

ಯಲ್ಲಾಪುರದಲ್ಲಿ ಮುಸ್ಲಿಂ ಸಮುದಾಯದ ಪವಿತ್ರ ರಂಜಾನ್ ಆಚರಣೆ

ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ಬಳ್ಳಾರಿ-ಕಾರವಾರ ಹೆದ್ದಾರಿ ಪಕ್ಕದಲ್ಲಿರುವ ಈದ್ಗಾ ಮೈದಾನದಲ್ಲಿ ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ನೂರಾರು ಮುಸ್ಲಿಂ ಬಾಂಧವರು ಸೇರಿ ಅಲ್ಲಾಹುಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಸುಮಾರು ಇಪ್ಪತ್ತೊಂಬತ್ತು ದಿನಗಳ ಉಪವಾಸ ಮಾಡಿ ಶುಕ್ರವಾರ ಚಂದ್ರ ದರ್ಶನ ಪಡೆದು ಶನಿವಾರ ಬೆಳಗ್ಗೆ 9-30 ರ ಸುಮಾರಿಗೆ ಸಮುದಾಯದ ಧರ್ಮ ಗುರುಗಳ ನೇತೃತ್ವದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಒಬ್ಬರಿಗೊಬ್ಬರು ಆಲಿಂಗಿಸಿಕೊಂಡು ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ನಂತರ …

Read More »

ಕ್ಷೇತ್ರದ ಮನೆ ಮನೆಗಳಲ್ಲಿ ಹೆಬ್ಬಾರ್ ಅಭಿಮಾನಿಗಳಿದ್ದು ಅವರು ಮಾಡಿದ ಅಭಿವೃದ್ಧಿ ಕೆಲಸವೆ ಅವರನ್ನು ಗೆಲ್ಲಿಸಲಿದೆ – ಸುಭಾಷ್ ಪಾಲ್ ದೇಸಾಯಿ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ – ಕ್ಷೇತ್ರದ ಜನರೊಂದಿಗೆ ಇರುವ ಸಂಪರ್ಕ, ಅಭಿವೃದ್ಧಿ ಕಾರ್ಯದಲ್ಲಿ ಕೈ ಗೊಳ್ಳಲಾದ ಕ್ರಮಗಳು ಮತ್ತು ಅದಕ್ಕಾಗಿ ವಿವಿಧ ಇಲಾಖೆಗಳ ಮಂತ್ರಿಗಳ ಮನವೊಲಿಸಿ ಕ್ಷೇತ್ರದ ಮೂಲಭೂತ ಸೌಕರ್ಯ ಕಲ್ಪಿಸಲು ತಂದ ಅಪಾರ ಪ್ರಮಾಣದ ಅನುದಾನ ಇವೆಲ್ಲದರ ಜೊತೆಯಲ್ಲಿ ಕೇಂದ್ರದಲ್ಲಿ ಮೋದಿ ನಾಯಕತ್ವ ರಾಜ್ಯದಲ್ಲಿ ಬಸವರಾಜ್ ಬೊಮ್ಮಾಯಿಯವರ ಅಭಿವೃದ್ಧಿ ಪರ ಸರ್ಕಾರದ ಕಾರ್ಯಗಳೆ ಸಚಿವ ಶಿವರಾಮ ಹೆಬ್ಬಾರ್ ಗೆಲುವಿಗೆ ಪೂರಕವಾಗಲಿದೆ ಎಂದು ಯಲ್ಲಾಪುರ …

Read More »

ದ್ವಿತೀಯ ಪಿಯುಸಿ ಫಲಿತಾಂಶ ; ಯಲ್ಲಾಪುರ ಸ.ಪ.ಪೂ ಕಾಲೇಜಿಗೆ 97.28% ಫಲಿತಾಂಶ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಸರ್ಕಾರಿ ಪದವಿಪೂರ್ವ ಕಾಲೇಜು 2023 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 97.28% ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 295 ವಿದ್ಯಾರ್ಥಿಗಳಲ್ಲಿ 287 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ವಿಜ್ಞಾನ ವಿಭಾಗದಲ್ಲಿ 100 % ಫಲಿತಾಂಶ ದಾಖಲಾಗಿದ್ದು 54 ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದಾರೆ. ವಿಘ್ನೇಶ ನಾಯ್ಕ 600 ಕ್ಕೆ 551 ಅಂಕಗಳಿಸಿ ಪ್ರಥಮ, 541 ಅಂಕಗಳೊಂದಿಗೆ ಸಂಕೇತ ವೆಂಕಟರಮಣ ಭಟ್ಟ ದ್ವಿತೀಯ, ರಾಹುಲ ಈರಾಚಂದ …

Read More »

ದ್ವಿತೀಯ ಪಿಯುಸಿ ಫಲಿತಾಂಶ ; ಕಿರವತ್ತಿ ಸ.ಪ.ಪೂ ಕಾಲೇಜಿಗೆ 81.53% ಫಲಿತಾಂಶ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಕಿರವತ್ತಿ ಸರ್ಕಾರಿ ಪದವಿಪೂರ್ವ ಕಾಲೇಜು 2023ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 81.53% ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 65ವಿದ್ಯಾರ್ಥಿಗಳಲ್ಲಿ 53 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ಕಲಾ ವಿಭಾಗದಲ್ಲಿ 76.59 % ಫಲಿತಾಂಶ ದಾಖಲಾಗಿದ್ದು 47 ವಿದ್ಯಾರ್ಥಿಗಳಲ್ಲಿ 36 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಮಧುಮತಿ ಕುಸಗಲ್ 600ಕ್ಕೆ 533 ಅಂಕಗಳಿಸಿ ಪ್ರಥಮ, 529 ಅಂಕಗಳೊಂದಿಗೆ ಲೋಕೇಶ್ವರಿ ಜಗದಾಳಿ ದ್ವಿತೀಯ, ಶಬೀನಾ ಶಿಗ್ಗಾವಿ …

Read More »

ಯಲ್ಲಾಪುರ ತಾಲೂಕಿನ ವಿದ್ಯಾಕಾಶಿ ವೈ.ಟಿ.ಎಸ್.ಎಸ್ ಅತ್ಯುತ್ತಮ ಫಲಿತಾಂಶ – 94.%

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಮಾರ್ಚ್ 2023 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸ್ಥಳೀಯ ವೈ.ಟಿ.ಎಸ್.ಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಒಟ್ಟು 150 ವಿದ್ಯಾರ್ಥಿಗಳಲ್ಲಿ 141 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಅದರಲ್ಲಿ 50 ಉನ್ನತ ಶ್ರೇಣಿ, 77 ಪ್ರಥಮ ಶ್ರೇಣಿ, 14 ದ್ವಿತೀಯ ಶ್ರೇಣಿಯಲ್ಲಿ ಉತ್ತಿರ್ಣ ಆಗಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ 95.83% ಫಲಿತಾಂಶ ಬಂದಿದ್ದು ವೈಷ್ಣವಿ ಹೆಗಡೆ 600 ಕ್ಕೆ 586 ಅಂಕಗಳೊಂದಿಗೆ ವಿಜ್ಞಾನ …

Read More »

ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಚುನವಣಾ ಕಣಕ್ಕೆ 10 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ – ನಾಮಪತ್ರ ಕ್ರಮಬದ್ದ ..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ-ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳಾಗಿ ಹತ್ತು‌ ಮಂದಿ ನಾಮಪತ್ರ ಸಲ್ಲಿಸಿದ್ದು ಹತ್ತು ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ದ ವಾಗಿದೆ ಇದರೊಂದಿಗೆ 10 ಅಭ್ಯರ್ಥಿಗಳು ಶಾಸಕ ಸ್ಥಾನದ ಆಯ್ಕೆಗಾಗಿ ಕಣಕ್ಕಿಳಿಯಲು ಸಿದ್ದರಾದಂತಾಗಿದೆ. ಬಿಜೆಪಿಯಿಂದ ಶಿವರಾಮ ಹೆಬ್ಬಾರ್, ಕಾಂಗ್ರೆಸ್ಸಿನಿಂದ ವಿ ಎಸ್ ಪಾಟೀಲ್, ಜೆಡಿಎಸ್‌ನಿಂದ ನಾಗೇಶ ನಾಯ್ಕ ಕಗಾಲ, ಕೆಆರ್‌ಎಸ್‌ನಿಂದ ಮಂಜುನಾಥ ಶಿರಟ್ಟಿ, ಕಲ್ಯಾಣ್ಯ ರಾಜ್ಯ ಪ್ರಗತಿ ಪಕ್ಷದಿಂದ ಸಂತೋಷ ರಾಯ್ಕರ್, ಆಮ್ ಆದ್ಮಿಯಿಂದ ಮಂಜುನಾಥ …

Read More »

ಚುನಾವಣೆ ಬಿರುಸಿನಲ್ಲು ಕಾಂಗ್ರೆಸ್ ಕಾರ್ಯಕರ್ತರಿಂದ ತಂಗುದಾಣ ಸ್ವಚ್ಚತೆ..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ-ಬೇಸಿಗೆಯ ರಜಾದಿನಗಳಲ್ಲಿ ಸುತ್ತ ಮುತ್ತಲಿನ ಪ್ರವಾಸೀ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರು ಸ್ಥಳೀಯ ಬಸ್ ತಂಗುದಾಣಗಳನ್ನು ಹಾಳು ಮಾಡುತ್ತಿದ್ದಾರೆ. ಪ್ರವಾಸದ ನೆಪದಲ್ಲಿ ಬರುವ ಕೆಲವರು ಇಂತಹ ತಂಗುದಾಣಗಳಲ್ಲಿನ ಅಸಭ್ಯ ವರ್ತನೆ, ಸಾರ್ವಜನಿಕ ಸ್ಥಳದ ದುರುಪಯೋಗದಿಂದ ಸ್ಥಳೀಯ ನಾಗರಿಕರು ತಲೆತಗ್ಗಿಸುವಂತೆ ಮಾಡಿದೆ. ಹೊರಗಿನಿಂದ ಬರುವ ಪ್ರವಾಸಿಗರ ಮೇಲೆ ಸ್ಥಳೀಯ ಆಡಳಿತ ನಿಗಾವಹಿಸಬೇಕಿದೆ. ಎಂದು ಹಿರಿಯ ಕಾಂಗ್ರೆಸ್ ಮುಖಂಡ ವಜ್ರಳ್ಳಿಯ ಟಿ.ಸಿ.ಗಾಂವ್ಕಾರ ಹೇಳಿದರು. ಯಲ್ಲಾಪುರ …

Read More »