Breaking News

Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

ಅರಣ್ಯ ಸಚಿವ ಈಶ್ವರ ಖಂಡ್ರೆ ಕಸ್ತೂರಿ ರಂಗನ್ ವರದಿ ಕುರಿತ ಹೊಸ ಹೇಳಿಕೆಗೆ ಶಾಸಕ ಹೆಬ್ಬಾರ್ ಸ್ವಾಗತ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ರಾಜ್ಯದ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಡಾ.ಕೆ.ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸರಕಾರ ಬದ್ಧವಾಗಿದೆ ಎಂದು ಹೇಳಿಕೆ ನೀಡುವ ಮೂಲಕ ವರದಿಯನ್ನು ಅನುಷ್ಠಾನಗೊಳಿಸುವ ಬಗ್ಗೆ ಸುಳಿವು ನೀಡಿದ್ದರು. ಡಾ,ಕಸ್ತೂರಿ ರಂಗನ್ ವರದಿ ಯಥಾವತ್ ಜಾರಿ ವಿರುದ್ದ ನನ್ನ ಹೋರಾಟವಿದೆ. ಇದಕ್ಕೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಬಲವಾಗಿ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿ …

Read More »

ಕನ್ನಡ ಭಾಷೆಯ ಮೇಲೆ ಯಾವುದೆ ಅನ್ಯ ಭಾಷೆಯ ಆಕ್ರಮಣ ಸಹಿಸಲಸಾಧ್ಯ- ವಾಸರೆ..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ: ಕನ್ನಡ ಭಾಷೆಯಲ್ಲಿ ಶೇಕಡಾ ೧೦೦ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ವಿಧಾಯಕ ಕಾರ್ಯಕ್ರಮವನ್ನು ಉತ್ತರಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಹಮ್ಮಿಕೊಳ್ಳುತ್ತಿರುವ ಶ್ರೇಷ್ಠ ಪರಂಪರೆಗೆ ಹೆಮ್ಮೆಯಿದೆ. ಇಂತಹ ಸಾರ್ಥಕ ಪ್ರೋತ್ಸಾಹದಾಯಕ ಕಾರ್ಯಕ್ರಮವನ್ನು ಆಳುವ ಸರ್ಕಾರಗಳು ಮಾಡಬೇಕಿದೆ. ಕನ್ನಡ ,ಭಾಷೆಯ ಮೇಲೆ ಅನ್ಯ ಭಾಷೆಗಳ ಆಕ್ರಮಣ ಸಹಿಸುವುದಿಲ್ಲ. ಏನಾದರಾಗು ಮೊದಲು ಮಾನವನಾಗು ಎಂಬ ಉಕ್ತಿಯಂತೆ ಕನ್ನಡತನವನ್ನು ಬಿಟ್ಟುಕೊಡದೇ ಯಾವುದೆ ಉದ್ಯೋಗದಲ್ಲಿರಲಿ ಉನ್ನತ ಸ್ಥಾನಮಾನದಲ್ಲಿರಲಿ ಮಾತೃಭಾಷೆಗೆ …

Read More »

ಗುಳ್ಳಾಪುರ 108 ಆಂಬುಲೆನ್ಸ್ ನಲ್ಲಿ ಸುರಕ್ಷಿತ ಹೆರಿಗೆ ತಾಯಿ ಮಗು ಕ್ಷೇಮ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಮಂಗನತಾವರೆಕೆರೆ ಗ್ರಾಮದ ನಿವಾಸಿ ಗೋದುಬಯಿ (23) ಎಂಬಾಕೆಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದ್ದು ಕುಟುಂಬದ ಸದಸ್ಯರು 108 ಆಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ತಕ್ಷಣ ಕಾರ್ಯ ಪ್ರವೃತ್ತರಾದ ಆಂಬುಲೆನ್ಸ್ ಸಿಬ್ಬಂದಿ ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮದ್ಯದಲ್ಲಿ ನೋವು ವಿಪರೀತ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಎಂಟಿ ಯಾಗಿದ್ದ ನಸ್೯ ಕುಸುಮ ನಾಯ್ಕ್ ಸಮಯಪ್ರಜ್ಞೆಯಿಂದ ಆಂಬುಲೆನ್ಸ್ ನಲ್ಲೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದು …

Read More »

ಯಲ್ಲಾಪುರ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷ ಸುರೇಶ್ ಬೋರ್ಕರ್ ಗೆ ಪಣಜಿಯಲ್ಲಿ ಲಭಿಸಿದ ವಿಶೇಷ ಪ್ರಶಸ್ತಿ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಗೋವಾದಲ್ಲಿ ನಡೆದ ಲಯನ್ಸ್ ಇಂಟರ್ ನ್ಯಾಷನಲ್ ಕಾರ್ಯಕ್ರಮದಲ್ಲಿ ಯಲ್ಲಾಪುರ ಟೌನ್ ಲಯನ್ಸ್ ಕ್ಲಬ್ ಅಧ್ಯಕ್ಷ ಸುರೇಶ್ ವಿ ಬೋರ್ಕರ್ ಗೆ ಸದಸ್ಯತ್ವ ಅಭಿಯಾನದ ಸಾಧನೆಗೆ ವಿಶೇಷ ಗೌರವ ಪ್ರಶಸ್ತಿ ಲಭಿಸಿದೆ. ಜುಲೈ,30, ರಂದು ಪಣಜಿಯಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ದೇಶ ವಿದೇಶಗಳಿಂದ ಆಗಮಿಸಿದ ಲಯನ್ಸ್ ಕ್ಲಬ್ ಪ್ರಮುಖರ ಸಮ್ಮುಖದಲ್ಲಿ ಪ್ರಶಸ್ತಿ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಯಲ್ಲಾಪುರ ಲಯನ್ಸ್ ಕ್ಲಬ್ ನ …

Read More »

ಡಾ,ಮಹಂತ ಶಿವಯೋಗಿ ಶ್ರೀ ಗಳ ಜನ್ಮ ದಿನವನ್ನು ” ವ್ಯಸನ ಮುಕ್ತ ” ದಿನವನ್ನಾಗಿ ಆಚರಿಸಲಾಯಿತು.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಇಂದಿನ ಯುವಕರು ವ್ಯಸನಿಗಳಾಗುತ್ತಿರುವುದು ತುಂಬಾ ಆತಂಕಕಾರಿ ವಿಷಯವಾಗಿದೆ. ಹಿಂದಿನ ಕಾಲದ ಜನರು ವ್ಯಸನ ಮುಕ್ತರಾಗಿ ಆರೋಗ್ಯಕರ ಜೀವನವನ್ನು ನಡೆಸಿರುತ್ತಾರೆ ಆದರೆ ಇಂದು ಯುವಕರು ದುಶ್ಚಟಗಳಿಗೆ ಬಲಿಯಾಗಿ ತಮ್ಮ ಜೀವನವನ್ನು ಹಾಳುಮಾಡಿಕೊಂಡು ಸಮಾಜಕ್ಕೆ ಕಂಟಕರಾಗಿದ್ದಾರೆ. ಆದ್ದರಿಂದ ಯುವಕರು ದುಶ್ಚಟಗಳಿಂದ ದೂರವಾಗಿ ಆರೋಗ್ಯಪೂರ್ಣ ಜೀವನ ನಡೆಸಬೇಕೆಂದು ಕ್ಷೇತ್ರಶಿಕ್ಷಣಾಧಿಕಾರಿ ಎನ್.ಆರ್ ಹೆಗಡೆ ಹೇಳಿದರು. ಅವರು ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ತಾಲೂಕಾ ಆಡಳಿತ …

Read More »

ಯಲ್ಲಾಪುರದ ರಾಷ್ಟ್ರೀಯ ಹೆದ್ದಾರಿ ಮೇಲೆ ಭೀಕರ ಅಪಘಾತ ಒರ್ವ ಸ್ಥಳದಲ್ಲೆ ಸಾವು..!!

ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ಹೊರವಲಯದಲ್ಲಿರುವ ಕೆ.ಮಿಲನ್ ಹೋಟೆಲ್ ಸಮೀಪ ಹಾದು ಹೋಗಿರುವ ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿಯ ಮೇಲೆ ಟ್ರಕ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರವಿವಾರ ನಡೆದಿದೆ.ತಾಲೂಕಿನ ತಾಳಿಕುಂಬ್ರಿ ನಿವಾಸಿ ವಾಸುದೇವ ಬಾರ್ಕೆಲ್ಯಾ ಸಿದ್ದಿ(35) ಎಂಬಾತನೇ ಮೃತಪಟ್ಟ ವ್ಯಕ್ತಿಯಾಗಿರುತ್ತಾನೆ. ರವಿವಾರ ಹುಬ್ಬಳ್ಳಿ ಕಡೆಯಿಂದ ಯಲ್ಲಾಪುರದ ಕಡೆಗೆ ಅತಿ ವೇಗ ಮತ್ತು ನಿಷ್ಕಾಳಜಿತನದಿಂದ ಮಹಾರಾಷ್ಟç ನೋಂದಣಿಯ ಟ್ರಕ್ ಚಲಾಯಿಸಿಕೊಂಡು ಬಂದ ಔರಾದ್ …

Read More »

ಕಾರ್ಯನಿರತ ಪತ್ರಕರ್ತರ ಸಂಘದ ” ಪತ್ರಿಕಾ ದಿನಾಚರಣೆ ” ಸಂಭ್ರಮ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಯಾವುದೇ ಪತ್ರಿಕೆ ಓದುಗರ ಸ್ವತ್ತೇ ಹೊರತು ಬರೆಯುವವರ ಸ್ವತ್ತಲ್ಲ ಎಂಬುದನ್ನು ವರದಿಗಾರರು ಮನಗಾಣಬೇಕಿದ್ದು, ಪತ್ರಕರ್ತರು ತಮ್ಮ ವೃತ್ತಿಗೆ ನ್ಯಾಯ ಒದಗಿಸುವುದೇ ಇಂತಹ ಕಾರ್ಯಕ್ರಮಗಳ ಸಾರ್ಥಕತೆಗೆ ಸಾಕ್ಷಿಯಾಗುತ್ತದೆ. ಅಲ್ಲದೇ ವರದಿಗಳು ಸಮಾಜದ ದೈನಂದಿನ ಆಗು-ಹೋಗುಗಳಿಗೆ ಸ್ಪಂದಿಸಿ, ಸಮಸ್ಯೆಗಳನ್ನು ನೀಗಿಸುವ ಮಾರ್ಗಸೂಚಿಯಾಗಿರಬೇಕು ಎಂದು ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು. ಅವರು ಪಟ್ಟಣದ ಅಡಿಕೆ ಭವನದಲ್ಲಿ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘವು …

Read More »

ಕಸ್ತೂರಿ ರಂಗನ್ ವರದಿ ಉತ್ತರ ಕನ್ನಡ ಜಿಲ್ಲೆಯ ಅರಣ್ಯವಾಸಿಗಳ ಮರಣ ಶಾಸನ ಜಾರಿಯಾಗಲು ಬಿಡುವುದಿಲ್ಲ.

ಉತ್ತರ ಕನ್ನಡ ಜಿಲ್ಲೆಯ ಜನಜೀವನ ಅರಣ್ಯವಾಸಿ ಬುಡಕಟ್ಟು ಜನಾಂಗದವರ ಮೇಲೆ ಗಂಭೀರ ಪರಿಣಾಮ ಬೀರಿ ನನ್ನ ನೆಲಕ್ಕೆ ದಕ್ಕೆಯಾಗಲಿರುವ ಡಾ,ಕೆ.ಕಸ್ತೂರಿ ರಂಗನ್ ವರದಿ ಜಾರಿಗೆ ನನ್ನ ಉಗ್ರ ಹೋರಾಟವಿದೆ – ಹೆಬ್ಬಾರ್ ಪ್ರತಿಧ್ವನಿ,ಯಲ್ಲಾಪುರ : ಕಸ್ತೂರಿ ರಂಗನ್ ವರದಿಯನ್ನು ಒಪ್ಪಿಕೊಂಡ ರಾಜ್ಯದ ಅರಣ್ಯ ಸಚಿವ ಈಶ್ವರ ಖಂಡ್ರೆ ತರಾತುರಿಯಲ್ಲಿ ಡಾ ಕೆ. ಕಸ್ತೂರಿ ರಂಗನ ವರದಿಯನ್ನು ಜಾರಿಗೊಳಸುವ ಬಗ್ಗೆ ತೀರ್ಮಾನಿಸಿರುವುದನ್ನು ನಾನು ಅತ್ಯಂತ ತೀವ್ರವಾಗಿ ವಿರೋದಿಸುತ್ತೇನೆ ಎಂದು ಯಲ್ಲಾಪುರ ವಿಧಾನ …

Read More »

ತರಕಾರಿ ತುಂಬಾ ದುಬಾರಿ – ಸಂಕಷ್ಟದಲ್ಲಿ ಹೊಟೆಲ್ ಉದ್ಯಮ

ಪ್ರತಿಧ್ವನಿ,ಯಲ್ಲಾಪುರ – ಪಟ್ಟಣದಲ್ಲಿ ನಡೆಯುವ ವಾರದ ಸಂತೆಯಲ್ಲಿ ಮಾರ್ಕೆಟ್ ರಾಣಿಯಾಗಿ ಟೊಮ್ಯಾಟೊ ಮೆರೆಯುತ್ತಿದ್ದರೆ ಇತರೆ ತರಕಾರಿಗಳು ನಾವು ಕಡಿಮೆ ಇಲ್ಲ ಎಂಬಂತೆ ಪೈಪೋಟಿಗೆ ಬಿದ್ದಂತಿದೆ ನಿದಾನವಾಗಿ ಇತರೆ ತರಕಾರಿಗಳು ದುಬಾರಿಯಾಗಿವೆ. ಇದರಿಂದ ಜನ ಸಾಮಾನ್ಯರು ಕಂಗಾಲಾಗಿದ್ದು ಹೊಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಎಣ್ಣೆಬೆಲೆ ಹೆಚ್ಚಾಯ್ತು. ತರಕಾರಿ ಬೆಲೆ ಹೆಚ್ಚಾಯ್ತು. ಗ್ಯಾಸ್ ಬೆಲೆ ಹೆಚ್ಚಾಯ್ತು ಎಂದು ಹೊಟೆಲ್ ತಿಂಡಿತಿನಿಸುಗಳ ಬೆಲೆ ಏಕಾಏಕಿ ಹೆಚ್ಚಿಸಲು ಬರುವುದಿಲ್ಲ. ಹಾಗೆಂದು ನಿತ್ಯ ಲುಕ್ಸಾನ ಅನುಭವಿಸಲು ಸಾದ್ಯವಿಲ್ಲ. …

Read More »

ಸೋರುತಿದೆ,ಕರೆಂಟ್ ಶಾಕ್, ಸಂಬಳವಿಲ್ಲ.ಏನೀ ಅವಾಂತರ ಇಂದಿರಾ ಕ್ಯಾಂಟೀನ್ ಗೆ ಗಂಡಾಂತರ..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ. ಪ್ರತಿಧ್ವನಿ,ಯಲ್ಲಾಪುರ : ಕಾಂಗ್ರೆಸ್ ಪಕ್ಷ ರಾಜ್ಯದ ಅಧಿಕಾರ‌ ಗದ್ದುಗೆ ಏರುತ್ತಲೆ ಜನ ಮಾನಸದಲ್ಲಿ ಅಂದುಕೊಂಡದ್ದು ಸಿದ್ದರಾಮಯ್ಯ ಮುಖ್ಯಮಂತ್ರಿಯಾದರೆ ಅವರೆ ತಂದ ಮಹತ್ವಾಕಾಂಕ್ಷಿ ಯೋಜನೆಯಾದ ಇಂದಿರಾ ಕ್ಯಾಂಟೀನ್ ಗೆ ಮತ್ತಷ್ಟು ಬಲತುಂಬಿ ರಾಜ್ಯಾದ್ಯಂತ ಇನ್ನಷ್ಟು ಕ್ಯಾಂಟಿನ್ ಗಳು ತಲೆ ಎತ್ತಲಿವೆ ಎನ್ನುವುದಾಗಿತ್ತು. ಆದರೆ ಯಲ್ಲಾಪುರದಲ್ಲಿ ಇರುವ ಕ್ಯಾಂಟಿನ್ ಕಟ್ಟಡ ಮಳೆ ನೀರು ಸೋರಿ ಕಟ್ಟಡವೆಲ್ಲಾ ವಿದ್ಯುತ್ ಪ್ರವಹಿಸಲು ಪ್ರಾರಂಭವಾಗಿ ಒಂದುವಾರಗಳ ಕಾಲ ಮುಚ್ಚಲಾಗಿತ್ತು …

Read More »