Breaking News

Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

“ಗೃಹಜ್ಯೋತಿ” ಯೋಜನೆಯ ಸಮಗ್ರ ಮಾಹಿತಿ ಜನತೆಗೆ ನೀಡಿ ವಿದ್ಯುತ್ ಇಲಾಖೆ ಸಿಬ್ಬಂದಿಗಳ ಮೇಲಿನ ಹಲ್ಲೆ ತಪ್ಪಿಸಿ. ಯಲ್ಲಾಪುರ ವಿದ್ಯುತ್ ನೌಕರರ ಮನವಿ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿ ನೀಡಿದ್ದು ಅದರಲ್ಲಿ “ಗೃಹ ಜ್ಯೋತಿ” ಕೂಡ ಒಂದಾಗಿದೆ. ಇದರ ಪ್ರಕಾರ ಪ್ರತಿ ಮನೆಗೆ 200 ಯುನಿಟ್ ವರೆಗೆ ಕರೆಂಟ್ ಬಿಲ್ ಉಚಿತ ಎಂಬುದಾಗಿತ್ತು.ಇದೀಗ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಕೊಟ್ಟ ಭರವಸೆಯನ್ನಾಧರಿಸಿ ರಾಜ್ಯದ ವಿದ್ಯುತ್ ಗ್ರಾಹಕರು ವಿದ್ಯುತ್ ಬಿಲ್ ಭರಿಸಲು ನಿರಾಕರಿಸುತ್ತಿದ್ದು ಬಿಲ್ ವಸೂಲಿಗೆ ತೆರಳುತ್ತಿರುವ ವಿದ್ಯುತ್ …

Read More »

ಗಾಳಿ ಮಳೆಗೆ ಕೋಟೆಮನೆಯಲ್ಲಿ ಹಾನಿ

ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಉಮ್ಮಚ್ಗಿ ಪಂಚಾಯತ ವ್ಯಾಪ್ತಿಯ ಕೋಟೆಮನೆಯಲ್ಲಿ ಮಂಗಳವಾರ ರಾತ್ರಿ ಬೀಸಿದ ಬಿರುಗಾಳಿ,ಮಳೆಯ ರಭಸಕ್ಕೆ ಆರೇಳು ಮನೆಗಳಿಗೆ ಹೆಚ್ಚಿನ ಪ್ರಮಾಣದ ಹಾನಿಯಾದ ಘಟನೆ ಸಂಭವಿಸಿರುತ್ತದೆ.ಗೌರಿ ರಾಮಾ ಸಿದ್ದಿ, ರುಕ್ಮಿಣಿ ಕೃಷ್ಣಾ ಸಿದ್ದಿ,ದೇವಕಿ ನಾರಾಯಣ ಪಟಗಾರ, ನಾರಾಯಣ ಮಡೂರ ಪೂಜಾರಿ, ಕೃಷ್ಣ ನಾಗಾ ಸಿದ್ದಿ ಮೊದಲಾದವರ ಮನೆಗಳ ಹೆಂಚು ಮತ್ತು ತಗಡಿನ ಶೀಟುಗಳು ಬಿರುಗಾಳಿಗೆ ಹಾರಿ ಹೋಗಿರುತ್ತವೆ. ಕೋಟೆಮನೆ ಅಂಗನವಾಡಿ ಕೇಂದ್ರಕ್ಕೂ ಬಿರುಗಾಳಿಯಿಂದ ಹಾನಿಯಾಗಿರುತ್ತದೆ. ರಾತ್ರಿ ಘಟನೆ ನಡೆದ ತಕ್ಷಣ …

Read More »

ಲೇಟಾಗಿ ಬಂದು ರೇಟಾದ ಮಾವು

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಹಣ್ಣುಗಳ ರಾಜ ಮಾವು, ವರ್ಷಕ್ಕೊಮ್ಮೆ ಮಾರುಕಟ್ಟೆ ಪ್ರವೇಶಿಸಿ ಮಾವಿನ ಹಣ್ಣಿ ಪ್ರಿಯರಿಗೆ ನಾಲಿಗೆಗೆ ರುಚಿ ಹತ್ತಿಸುತ್ತದೆ. ಈ ಬಾರಿ ಅದೇಕೋ ಮಾರುಕಟ್ಟೆಗೆ ಮಾವು ತಡವಾಗಿ ಬಂದಿದ್ದು ಹೆಚ್ಚಿನ ದರಕ್ಕೆ ಬಿಕರಿಯಾಗುತ್ತಿದೆ.ಘಟ್ಟದ ಕೆಳಗಿನ ಕರೆ ಈಶಾಡ ಮಾವು , ಘಟ್ಟದ ಮೇಲಿನವರಿಗೆ ಅತ್ಯಂತ ಪ್ರಿಯವಾದುದು. ಸದ್ಯ ಮಾವಿನ ಮಾರುಕಟ್ಟೆಯಲ್ಲಿ ಆಪೂಸ್, ಮಲ್ಲಿಕಾ, ಸೆಂದೂಲಾ, ಕಸಿ ಮುಂತಾದ ಜಾತಿಯ ಮಾವು ಮಾರಾಟವಾಗುತ್ತಿದ್ದು …

Read More »

ಮುರಿದು ಬಿದ್ದಿರುವುದು ಫಲಕವೆ ಆದರು ಗೌರವ ತಗ್ಗುವುದು ಇಲಾಖೆಗೆ ಅದರ ಅನ್ನ ತಿನ್ನುವ ಅಧಿಕಾರಿಗಳಿಗೆ..!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಸರ್ಕಾರದ್ದು ಎಂದ ಕೂಡಲೇ ಆಲಸ್ಯ, ನಿರ್ಲಕ್ಷ್ಯ ಬೇಜವಾಬ್ದಾರಿ ಮತ್ತು ನನ್ನದಲ್ಲ ಎಂಬ ಭಾವ ಅದೇಕೋ ಬಹುಸಮಯದಿಂದ ಕೆಲವು ಇಲಾಖೆ ಮತ್ತು ಅಧಿಕಾರಿಗಳ ತಲೆಯಲ್ಲಿ ತುಂಬಿಬಿಟ್ಟಿದೆ. ಅದಕ್ಕೆ ತಾಜಾ ಉದಾಹರಣೆ; ಯಲ್ಲಾಪುರದ ಹಳೆಯ ತಹಸೀಲ್ದಾರ ಕಚೇರಿ ಆವರಣದಲ್ಲಿರುವ ಉಪ ಖಜಾನೆ ಕಚೇರಿಯ ನಾಮಫಲಕ ಬಹು ಸಮಯದಿಂದ ಮುರಿದು ಬಿದ್ದಿದ್ದು ಪ್ರತಿ ನಿತ್ಯ ಅದೇ ಕಚೇರಿ ಸಂಬಧಿಸಿದ ಅಧಿಕಾರಿಗಳು, ಸಿಬ್ಬಂದಿ ವರ್ಗ …

Read More »

ಶ್ರೀಮಾತಾ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘದ ದ್ವಿದಶಮಾನೋತ್ಸವ ಸಂಭ್ರಮ

ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಉಮ್ಮಚಗಿಯಲ್ಲಿ ಕಾರ್ಯಾಲಯವನ್ನು ಹೊಂದಿ ಯಲ್ಲಾಪುರ, ಶಿರಸಿ, ಮುಂಡಗೋಡು ಹಾಗೂ ಹಿರೇಸರ (ಪತ್ತೇತರ) ಶಾಖೆಗಳನ್ನು ಹೊಂದಿರುವ ಶ್ರೀಮಾತಾ ವಿವಿಧ್ಧೋದ್ದೇಶಗಳ ಸೌಹಾರ್ದ ಸಹಕಾರಿ (ಹಿರೇಸರ) ಯು ದ್ವಿದಶಮಾನೋತ್ಸವ ವರ್ಷಾಚರಣೆಯ ಸಂಭ್ರಮದ ಹೊಸ್ತಿಲಲ್ಲಿದೆ ಎಂದು ಸಹಕಾರಿಯ ಅಧ್ಯಕ್ಷ ಜಿ.ಎನ್.ಹೆಗಡೆ ಹಿರೇಸರ ಹೇಳಿದರು.ಅವರು ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಕರೆದಿದ್ದ ಸುದ್ಧಿಗೋಷ್ಟಿಯಲ್ಲಿ ದ್ವಿದಶಮಾನೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ, ಮಾಧ್ಯಮದವರಿಗೆ ಮಾಹಿತಿ ನೀಡುತ್ತಿದ್ದರು.ಸುಮಾರು 20 ವರ್ಷಗಳ ಹಿಂದೆ (2004) ಅತ್ಯಂತ ಆರ್ಥಿಕ …

Read More »

ಯಲ್ಲಾಪುರ ಅರ್ಬನ್ ಬ್ಯಾಂಕ್ ಗೆ 25 ರ ಸಂಭ್ರಮ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ: ಯಲ್ಲಾಪುರ ನೆಲದ ಶಕ್ತಿ ಮಾತೆ ತಾಯಿ ಗ್ರಾಮದೇವಿ ಅನುಗ್ರಹದಲ್ಲಿ ಆರ್ಥಿಕ ವಹಿವಾಟಿಗೆಂದು 25 ವರ್ಷಗಳ ಹಿಂದೆ ಸದುದ್ದೇಶದಿಂದ 3 ಲಕ್ಷದಿಂದ ಪ್ರಾರಂಭವಾದ ಪುಟ್ಟ ಸಂಸ್ಥೆಯೊಂದು ಬೃಹದಾಕಾರವಾಗಿ ಬೆಳೆದು ಉತ್ತರ ಕನ್ನಡ ಜಿಲ್ಲೆಯಾದ್ಯಂತ ಆರು ಶಾಖೆಗಳನ್ನು ಹೊಂದಿದ್ದು ಪ್ರಸಕ್ತ ಆರ್ಥಿಕ ವರ್ಷದ ಕೊನೆಯಲ್ಲಿ 59 ಕೋಟಿ ದುಡಿಯುವ ಬಂಡವಾಳ ಹೊಂದಿದ್ದು 70 ಲಕ್ಷ ಲಾಭ ಗಳಿಸಿದೆ. ದೈವಾನುಗ್ರಹದಿಂದ ಗ್ರಾಹಕರ ನಂಬಿಕೆ , …

Read More »

ಅರಬೈಲ್ ಶಿವರಾಮ ಹೆಬ್ಬಾರ್ ಎಂಬ ಹೆಸರಿನ ನಾನು.. ಹೆಬ್ಬಾರ್ ಪ್ರಮಾಣ ವಚನ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ರಾಜ್ಯದಲ್ಲಿ ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದಿಂದ ನಾಲ್ಕನೇ ಬಾರಿ ಆಯ್ಕೆಯಾದ ಅರಬೈಲ್ ಶಿವರಾಮ ಹೆಬ್ಬಾರ್ ಸೋಮವಾರ ಅಧಿವೇಶನದ ಮೊದಲ ದಿನ ಪ್ರಮಾಣ ವಚನ ಸ್ವೀಕರಿಸಿದರು. ಕಾಂಗ್ರೆಸ್ ಪಕ್ಷ ನಿಚ್ಛಳ ಬಹುಮತ ಪಡೆದು ಸರ್ಕಾರ ರಚಿಸಿದ್ದು ಸೋಮವಾರ ಕರೆದ ಮೊದಲ ಅಧಿವೇಶನದಲ್ಲಿ ಹಂಗಾಮಿ ಸ್ಪೀಕರ್ ಆರ್.ವಿ ದೇಶಪಾಂಡೆಯವರ ಸಮ್ಮುಖದಲ್ಲಿ ಭಗವಂತನ ಹೆಸರಿನಲ್ಲಿ ಪ್ರಮಾಣ …

Read More »

ಸಂಸ್ಕಾರವಂತ ಮತ್ತು ಗುಣಮಟ್ಟದ ಶಿಕ್ಷಣಕ್ಕಾಗಿ ಯಲ್ಲಾಪುರ ವೈಟಿಎಸ್ಎಸ್ ನಿಮ್ಮ ಆಯ್ಕೆಯಾಗಿರಲಿ

ಶಿಕ್ಷಣಕ್ಕೆ ವೈಟಿಎಸ್ಎಸ್ ಉತ್ತಮ ಆಯ್ಕೆ ಏಕೆ ??? >> ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿರುವ ವಿದ್ಯಾ ಸಂಸ್ಥೆ >> ದೀರ್ಘಕಾಲದ ವಿದ್ಯಾದಾನಗೈದ ಸಾತ್ವಿಕ ಇತಿಹಾಸ. >> ಜಾತಿ,ಮತ,ಧರ್ಮ,ಅಂತಸ್ತು ಭೇದವಿರದ ಸರ್ವಜನಾಂಗದ ವಿದ್ಯಾಕಾಶಿ. >> ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಹೊರಗಡೆ ಸಿಗುವ ಉನ್ನತ ಸ್ಥಾಯಿಯ ಗೌರವ. >> ಪಠ್ಯ ಮಾತ್ರವಲ್ಲದೆ ಪಠ್ಯೇತರ ಚಟುವಟಿಕೆಯಲ್ಲು ಸಂಸ್ಥೆ ಮುಂಚೂಣಿಯಲ್ಲಿ. >> ಸಂಸ್ಕಾರವಂತ ಶಿಕ್ಷಣ ಕಲಿಕೆ ಮಾತ್ರವಲ್ಲದೆ ಸಾಂಸ್ಕೃತಿಕ ಸೊಬಗು ಪಸರಿಸುವ ಶಾಲೆ. >> ಉತ್ತಮ …

Read More »

ಯಲ್ಲಾಪುರ ಸಂತೆಯಲ್ಲಿ ಬಿಡಾಡಿ ದನಗಳದ್ದೆ ದರ್ಬಾರು – ಹೈರಾಣಾದ ವ್ಯಾಪಾರಿಗಳು ಗ್ರಾಹಕರು

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದಲ್ಲಿ ಪ್ರತಿ ರವಿವಾರದಂದು ವಾರದ ಸಂತೆ ನಡೆಯುತ್ತಿದ್ದು ಪ್ರತಿ ವಾರ ವ್ಯಾಪಾರಿಗಳಿಗೆ, ಕೊಳ್ಳುವ ಗ್ರಾಹಕರಿಗೆ , ಸಂಚರಿಸುವ ಸಾರ್ವಜನಿಕರಿಗೆ ಬೀಡಾಡಿ ದನಗಳ ಕಾಟ ಹೆಚ್ಚಾಗಿದ್ದು ಸಮಸ್ಯೆ ಬಗೆಹರಿಸಬೇಕಾದ ಪಟ್ಟಣ ಪಂಚಾಯತ ಕರವಸೂಲಿಗಷ್ಟೇ ಸೀಮಿತವಾಗಿರುವುದು ಗ್ರಾಹಕರ, ವ್ಯಾಪಾರಿಗಳ ಆಕ್ರೋಶಕ್ಕೆ ಕಾರಣವಾಗಿದೆ.ಯಲ್ಲಾಪುರದಲ್ಲಿ ರವಿವಾರ ನಡೆಯುವ ಸಂತೆಗೆ ಜಿಲ್ಲೆಯ ವ್ಯಾಪಾರಿಗಳಲ್ಲದೇ ಅಕ್ಕಪಕ್ಕದ ಜಿಲ್ಲೆಗಳಿಂದ ರೈತರು, ವ್ಯಾಪಾರಿಗಳು, ಹಣ್ಣು-ತರಕಾರಿ, ದವಸ ಧಾನ್ಯಗಳನ್ನು ಮಾರಾಟಕ್ಕೆ ತಂದು …

Read More »

ರಾಜ್ಯದ 24 ನೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಯಲ್ಲಾಪುರ ಕಾಂಗ್ರೆಸ್ ಪಾಳಯದಲ್ಲಿ ಹರ್ಷೋದ್ಗಾರ.

ಪ್ರತಿಧ್ವನಿ,ಯಲ್ಲಾಪುರ – ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಪಟಾಕಿ ಸದ್ದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಪರ ಜಯಘೋಷ ಮುಗಿಲು ಮುಟ್ಟಿತ್ತು. ನಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಎನ್.ಗಾಂವ್ಕರ್ ಮಾತನಾಡಿ ರಾಜ್ಯಕ್ಕಿಂದು ಹಬ್ಬದ ವಾತಾವರಣ ಬಡವರ,ಶೋಷಿತರ, ಅಲ್ಪಸಂಖ್ಯಾತರ, ದಲಿತ, ಹಿಂದುಳಿದ,ಮಧ್ಯಮ ವರ್ಗದ ಜನ ನಾಯಕರಾಗಿ ಗುರುತಿಸುವ ಸಿದ್ದರಾಮಯ್ಯ ಅವರು ರಾಜ್ಯದ ಚುಕ್ಕಾಣಿ ಹಿಡಿದದ್ದು ಕರ್ನಾಟಕದ ಭಾಗ್ಯವಾಗಿದೆ. ಯುವಕರ ಕಣ್ಮಣಿ ಪಕ್ಷವನ್ನು ಸಂಕಷ್ಟದಲ್ಲು ಕಟ್ಟಿ ಬೆಳೆಸಿ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ ಡಿ.ಕೆ ಶಿವಕುಮಾರ್ ಅವರು …

Read More »